26/05/2026
II ಜೈ ಶ್ರೀ ಗುರುದೇವ್ II
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ, ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯಾಶೀರ್ವಾದಗಳೊಂದಿಗೆ, ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿರವರ ಆಶೀರ್ವಾದಗಳೊಂದಿಗೆ
ಬಿಜಿಎಸ್ ವಿಜ್ಞಾತಂ ಸೌತ್ ಕ್ಯಾಂಪಸ್, ಬಿಜಿಎಸ್ ಪಿಯು ಕಾಲೇಜು ನಗರೂರು, ಬೆಂಗಳೂರು ಉತ್ತರ ತಾಲ್ಲೂಕು. ದಿನಾಂಕ 26-05-2026 ರಂದು 2025-26 ನೇ ಸಾಲಿನ ಪ್ರಥಮ ಪಿಯುಸಿ ಮಕ್ಕಳಿಗೆ ಸ್ವಸ್ತಿ -2026 ಕಾರ್ಯಕ್ರಮವನ್ನು ನಗರೂರಿನ ಬಿಜಿಎಸ್ ಪಿಯು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಡಾ.ಎನ್. ಶಿವರಾಮ್ ರೆಡ್ಡಿ ಸಿಇಒ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ , ಡಾ.ಎನ್. ಮಧುಸೂದನ್, ಡೀನ್ ಬಿಜಿಎಸ್ ಪಿಯು ಕಾಲೇಜುಗಳು ಚಿಕ್ಕಬಳ್ಳಾಪುರ ಇವರುಗಳು ಭಾಗವಹಿಸಿದ್ದರು. ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಜೀವನದ ನೈತಿಕ ಮೌಲ್ಯಗಳ ಮಹತ್ವವನ್ನು ತಿಳಿಸಿದರು. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶಾಂತಕುಮಾರ್, ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.