NES Institute of Advanced Studies

NES Institute of Advanced Studies NES Institute of Advanced Studies "विद्यया अमृतमश्नुते।"

🙏parakram divas...........
23/01/2026

🙏parakram divas...........

congrats......ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಕಾಲೇಜಿನ ವಿದ್ಯಾರ್ಥಿಗಳು ಅನವರತ ಫೌಂಡೇಶನ್ (ರಿ), ಶಿವಮೊಗ್ಗ ಇವರ ಆಶ್ರಯದಲ...
23/01/2026

congrats......
ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಕಾಲೇಜಿನ ವಿದ್ಯಾರ್ಥಿಗಳು ಅನವರತ ಫೌಂಡೇಶನ್ (ರಿ), ಶಿವಮೊಗ್ಗ ಇವರ ಆಶ್ರಯದಲ್ಲಿ “ಸಿಹಿ ಮೊಗ್ಗೆ ಸಂಭ್ರಮ–02 : ಮಲೆನಾಡಿನ ಮಣ್ಣಿನ ಸಂಸ್ಕೃತಿ ಸೊಗಡು” ಎಂಬ ಶೀರ್ಷಿಕೆಯಡಿಯಲ್ಲಿ ದಿನಾಂಕ 21/01/2026ರ ಬುಧವಾರ ನಗರದ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದರು.
ಸ್ಪರ್ಧಾ ಫಲಿತಾಂಶದಲ್ಲಿ
ಜಾನಪದ ಗೀತೆ ವಿಭಾಗದಲ್ಲಿ ತೃತೀಯ ಬಹುಮಾನ,
ಸಿರಿಗೌರಿ – ರೀಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಹಾಗೂ
ಪ್ರೇಮ್ ಸಾಯಿ – ಏಕಪಾತ್ರ ಅಭಿನಯದಲ್ಲಿ ಸಮಾಧಾನಕರ ಬಹುಮಾನವನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಾಪಕರುಗಳಾದ ಶ್ರೀ. ಅರುಣ್ ಕುಮಾರ್ ಎಂಎಸ್,ಶ್ರೀ ವೆಂಕಟೇಶ್ ಸೊರಬ್ ಮತ್ತು ಕು.ಸುಜಾತ.ಆರ್ ಉಪಸ್ಥಿತರಿದ್ದರು.
ವಿಜೇತ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಬಿ.ಎಸ್.ಹಾಗೂ ಬೋಧಕ–ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

-NESIAS

  ....Volleyball Runners  -Sportsmeet
19/01/2026

....
Volleyball Runners -Sportsmeet

ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್‌ನಲ್ಲಿ ಸ್ವಾಮಿ ವಿವೇಕಾನಂದರ 163ನೇ ಜನ್ಮ ದಿನಾಚರಣೆನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ...
19/01/2026

ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್‌ನಲ್ಲಿ ಸ್ವಾಮಿ ವಿವೇಕಾನಂದರ 163ನೇ ಜನ್ಮ ದಿನಾಚರಣೆ
ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ಕಾಲೇಜಿನ ವಿವಿಧ ಘಟಕಗಳ ವತಿಯಿಂದ 12 ಜನವರಿ 2026 ರಂದು ಭಾರತದ ಮಹಾನ್ ಸಂತ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 163ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಕಛೇರಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ದೇಶಕ್ಕೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸ್ವಾಮಿ ವಿವೇಕಾನಂದರ ಕೊಡುಗೆಗಳನ್ನು ಹೃತ್ಪೂರ್ವಕವಾಗಿ ಸ್ಮರಿಸಿ, ಕನ್ನಡ ಉಪನ್ಯಾಸಕರಾದ ಡಾ. ಶಂಕರಪ್ಪರವರು ಸ್ವಾಮಿ ವಿವೇಕಾನಂದರ ಜೀವನ, ತತ್ತ್ವಗಳು, ಯುವ ಸಮುದಾಯಕ್ಕೆ ನೀಡಿದ ಪ್ರೇರಣೆ ಮತ್ತು ಸಮಾಜೋದ್ದೀಪನೆಯಲ್ಲಿ ಅವರ ಪಾತ್ರವನ್ನು ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಬಿಎಸ್ ಅವರು ಸ್ವಾಮಿ ವಿವೇಕಾನಂದರ ಸ್ತೋತ್ರಾಚರಣೆಯ ಮಹತ್ವವನ್ನು ವಿವರಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

 .....
19/01/2026

.....

*ಹಿರಿಯ ವಿದ್ಯಾರ್ಥಿ ಸಂಘ ಸಮ್ರಿಷ್ಟ–2025ಸರಸ್ವತಿ ಮಂಟಪ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ* ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ...
19/01/2026

*ಹಿರಿಯ ವಿದ್ಯಾರ್ಥಿ ಸಂಘ ಸಮ್ರಿಷ್ಟ–2025
ಸರಸ್ವತಿ ಮಂಟಪ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ*

ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘ “ಸಮ್ರಿಷ್ಟ–2025” ಕಾರ್ಯಕ್ರಮವು ದಿನಾಂಕ 27/12/2025ರ ಶನಿವಾರ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಸರಸ್ವತಿ ವಿಗ್ರಹಕ್ಕೆ ಮಂಟಪ ನಿರ್ಮಾಣಕ್ಕಾಗಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ದೇಣಿಗೆ ಹಸ್ತಾಂತರಿಸಲಾಯಿತು.
ಕಾರ್ಯಕ್ರಮವನ್ನು ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಜೀವ ಸದಸ್ಯರಾದ ಶ್ರೀ ಟಿ.ಎ. ರಾಮಪ್ರಸಾದ್ ಅವರು ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದು ಎಂದರು. ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ ಕಾಲೇಜು ಸದೃಢವಾಗಿ ಮುಂದುವರಿಯಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಶೈಕ್ಷಣಿಕ ಆಡಳಿತಾಧಿಕಾರಿಗಳಾದ ಶ್ರೀ ಎ.ಎನ್. ರಾಮಚಂದ್ರ ಅವರು, ವಿದ್ಯಾ ಸಂಸ್ಥೆಗಳ ಅಭಿವೃದ್ಧಿಗೆ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವ ಮತ್ತು ಬೆಂಬಲ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಬಿ.ಎಸ್. ವಹಿಸಿ ಮಾತನಾಡಿ, ಹಿರಿಯ ವಿದ್ಯಾರ್ಥಿ ಸಂಘವು ಕೇವಲ ಸಂಘಟನೆಯಲ್ಲದೆ, ಸಂಸ್ಥೆಯ ಪ್ರಗತಿಗೆ ಬೆಂಬಲವಾಗಿರುವ ಶಕ್ತಿಯಾಗಿದೆ ಎಂದು ಶ್ಲಾಘಿಸಿದರು.
ಪ್ರಾಸ್ತಾವಿಕ ನುಡಿಯನ್ನು ಸಂಘದ ಅಧ್ಯಕ್ಷರು ಹಾಗೂ ಕಾಲೇಜಿನ ಉಪನ್ಯಾಸಕರಾದ ಶ್ರೀ ವಿನಯ್ ಎಚ್.ಬಿ.ಪಟೇಲ್ ಅವರು ಮಾತನಾಡಿ ಸಂಘದ ಉದ್ದೇಶಗಳು ಹಾಗೂ ಸರಸ್ವತಿ ಮಂಟಪ ನಿರ್ಮಾಣದ ಮಹತ್ವವನ್ನು ವಿವರಿಸಿದರು.
ವೇದಿಕೆಯ ಮೇಲೆ ಸಂಘದ ಉಪಾಧ್ಯಕ್ಷರಾದ ಶ್ರೀ ಓಂಕಾರ್, ಕಾರ್ಯದರ್ಶಿಗಳಾದ ಪೃಥ್ವಿರಾಜ್ ಗಿರಿ ಮಾಜಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ಕಾರ್ಯದರ್ಶಿಗಳಾದ ಶ್ರೀ ಕುಶಾಲ್, ಖಜಾಂಚಿಗಳಾದ ಶ್ರೀ ಸುಪ್ರೀತ್, ಸಂಘದ ನಿರ್ದೇಶಕರು, ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಶ್ರೀಮತಿ ಪೂರ್ಣಿಮಾ ಅವರು ಸುಂದರವಾಗಿ ನಿರೂಪಿಸಿದರು. ಶ್ರೀ ಪ್ರಮೋದ್ ಮಠ ಅವರು ಸ್ವಾಗತ ಭಾಷಣ ಮಾಡಿದರು. ಕು. ರಚನಾ ಅವರು ಪ್ರಾರ್ಥನೆ ನೆರವೇರಿಸಿದರು. ಶ್ರೀ ಸಂಜಯ್ ಅವರು ವಂದನಾರ್ಪಣೆ ಸಲ್ಲಿಸಿದರು.
ಸಭಾ ಕಾರ್ಯಕ್ರಮದ ನಂತರ ಹಿರಿಯ ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರಿಯಾತ್ಮಕ ಆಟಗಳನ್ನು ಆಯೋಜಿಸಿ ಮನರಂಜನೆ ಒದಗಿಸಲಾಯಿತು. ಕಾರ್ಯಕ್ರಮವು ಸೌಹಾರ್ದಯುತ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.

 ....
19/01/2026

....

Hearty Welcome....
22/12/2025

Hearty Welcome....

 ...*ಅಂತರ ವಿಶ್ವವಿದ್ಯಾಲಯ ಪುರುಷರ ಟೇಬಲ್ ಟೆನಿಸ್ ಪಂದ್ಯಾವಳಿ :ಕುವೆಂಪು ವಿವಿ ತಂಡದಲ್ಲಿ ಎನ್ಇಎಸ್ ಐಎಎಸ್ ಕಾಲೇಜಿನ ವಿದ್ಯಾರ್ಥಿ ಪ್ರಜನ್ಯ ಸಿ...
22/12/2025

...
*ಅಂತರ ವಿಶ್ವವಿದ್ಯಾಲಯ ಪುರುಷರ ಟೇಬಲ್ ಟೆನಿಸ್ ಪಂದ್ಯಾವಳಿ :
ಕುವೆಂಪು ವಿವಿ ತಂಡದಲ್ಲಿ ಎನ್ಇಎಸ್ ಐಎಎಸ್ ಕಾಲೇಜಿನ ವಿದ್ಯಾರ್ಥಿ ಪ್ರಜನ್ಯ ಸಿ ಆಯ್ಕೆ*
ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ವಿದ್ಯಾರ್ಥಿ ಪ್ರಜನ್ಯ ಸಿ ಅವರು ತಮಿಳುನಾಡಿನ ಎಎಂಇಟಿ (AMET) ವಿಶ್ವವಿದ್ಯಾಲಯದಲ್ಲಿ ದಿನಾಂಕ 25-12-2025ರಿಂದ 28-12-2025ರವರೆಗೆ ನಡೆಯಲಿರುವ ಅಂತರ ವಿಶ್ವವಿದ್ಯಾಲಯ ಮಟ್ಟದ ಪುರುಷರ ಟೇಬಲ್ ಟೆನಿಸ್ ಪಂದ್ಯಾವಳಿಗೆ ಕುವೆಂಪು ವಿಶ್ವವಿದ್ಯಾಲಯದ ತಂಡದ ಪರವಾಗಿ ಆಯ್ಕೆಯಾಗಿದ್ದಾರೆ.
ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ ಶಿವಪ್ರಸಾದ್ ಬಿಎಸ್,ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಯತೀಶ್ ಎಸ್ ಕೆ ಹಾಗೂ ಬೋಧಕ ವೃಂದವು ಪ್ರಜನ್ಯ ಸಿ ಅವರಿಗೆ ಅಭಿನಂದನೆ ಸಲ್ಲಿಸಿ, ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
-NESIAS

ಎನ್.ಇ.ಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್‌ನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಆನ್‌ಲೈನ್ ಜಾಗೃತಿ ಕಾರ್ಯಕ್ರಮ ನಗರದ ಎನ್.ಇ.ಎಸ್ ಇನ್ಸ್...
02/12/2025

ಎನ್.ಇ.ಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್‌ನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಆನ್‌ಲೈನ್ ಜಾಗೃತಿ ಕಾರ್ಯಕ್ರಮ

ನಗರದ ಎನ್.ಇ.ಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ಕಾಲೇಜಿನಲ್ಲಿ 01 ಡಿಸೆಂಬರ್ 2025ರಂದು ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಆನ್‌ಲೈನ್ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀಮತಿ ವಿನುತ ಟಿ. ಶೈಣೈ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ಮುಖ್ಯ ಉದ್ದೇಶವು HIV/ಏಡ್ಸ್ ಕುರಿತು ಸರಿಯಾದ ಮಾಹಿತಿ, ಜಾಗೃತಿ, ಹಾಗೂ ಸಮಾಜದಲ್ಲಿ ಕರುಣೆ, ಗೌರವ ಮತ್ತು ಬೆಂಬಲವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವುದಾಗಿತ್ತು. ಕಾರ್ಯಕ್ರಮದಲ್ಲಿ ಭಾರತೀಯ ಯುವ ರೆಡ್ ಕ್ರಾಸ್ ಘಟಕದ ತರಬೇತುದಾರರಾದ ಡಾ. ಕುಮಾರ್ ವಿಎಲ್ಎಸ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ತಮ್ಮ ಅಮೂಲ್ಯ ಮಾರ್ಗದರ್ಶನ ಮತ್ತು ಅರಿವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿದರು.

ಮುಖ್ಯ ಅತಿಥಿಗಳಾದ ಕುವೆಂಪು ವಿಶ್ವವಿದ್ಯಾಲಯದ ನೊಡಲ್ ಅಧಿಕಾರಿಗಳಾದ ಶ್ರೀ ರವೀಂದ್ರ ಗೌಡ ಅವರು, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಈ ಮಾರಣಾಂತಿಕ ಕಾಯಿಲೆಗಳ ಕುರಿತು ಇರುವ ಮೂಢ ನಂಬಿಕೆಗಳನ್ನು ಕಡಿಮೆ ಮಾಡಿ ಜಾಗೃತಿ ಮೂಡಿಸುವಲ್ಲಿ ಮಹತ್ವಪೂರ್ಣವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀ ಈಶ್ವರ್, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಗಳಾದ ಶ್ರೀ ಚಂದನ್ ಮತ್ತು ಶ್ರೀ ಗುರುರಾಜ್ ಎನ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ಯುವಕರಿಗೆ HIV/ಏಡ್ಸ್ ಕುರಿತು ಜಾಗೃತಿ ಮೂಡಿಸುವುದರಲ್ಲಿ ಯಶಸ್ವಿ ಮತ್ತು ಪರಿಣಾಮಕಾರಿ ಆಯೋಜನೆಯಾಗಿ ಗಮನ ಸೆಳೆಯಿತು.

-NESIAS

ಭಗವದ್ಗೀತೆ ಪಠಣ ಅಭಿಯಾನದಲ್ಲಿ ಎನ್.ಇ.ಎಸ್ಐ.ಎ.ಎಸ್ ಕಾಲೇಜಿನ 30 ವಿದ್ಯಾರ್ಥಿಗಳ ಸೇವೆಶಿವಮೊಗ್ಗ:  ಎನ್.ಇ.ಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ...
02/12/2025

ಭಗವದ್ಗೀತೆ ಪಠಣ ಅಭಿಯಾನದಲ್ಲಿ ಎನ್.ಇ.ಎಸ್ಐ.ಎ.ಎಸ್ ಕಾಲೇಜಿನ 30 ವಿದ್ಯಾರ್ಥಿಗಳ ಸೇವೆ

ಶಿವಮೊಗ್ಗ: ಎನ್.ಇ.ಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ 30 ವಿದ್ಯಾರ್ಥಿಗಳು ನಗರದ ಫ್ರೀಡಂ ಪಾರ್ಕ್‌ನಲ್ಲಿ 30-11-2025 (ಭಾನುವಾರ) ನಡೆದ ಭಗವದ್ಗೀತೆ ಪಠಣ ಅಭಿಯಾನ ಕಾರ್ಯಕ್ರಮದಲ್ಲಿ ಸ್ವಯಂಸೇವಕರಾಗಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಶಿಸ್ತಿನ ನಿರ್ವಹಣೆ, ಆಹಾರ ವಿತರಣೆ ಹಾಗೂ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡುವಲ್ಲಿ ಅವರು ಮಹತ್ವದ ಸೇವೆ ಸಲ್ಲಿಸಿದರು. ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದ ಎಲ್ಲಾ ರೋವರ್ಸ್ ಮತ್ತು ರೇಂಜಸ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ಪ್ರಧಾನ ಮಾಡಲಾಯಿತು.ಈ ಸಂದರ್ಭದಲ್ಲಿ ಕಾಲೇಜಿನ ರೋವರ್ಸ್ ಸ್ಕೌಟ್ ಲೀಡರ್ ಶ್ರೀ ವಿನಯ್ ಹೆಚ್.ಬಿ ಮತ್ತು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು

-NESIAS

Address

JNNCE Campus, Navule
Shimoga
577204

Website

Alerts

Be the first to know and let us send you an email when NES Institute of Advanced Studies posts news and promotions. Your email address will not be used for any other purpose, and you can unsubscribe at any time.

Share